ಶುಕ್ರವಾರ, ಸೆಪ್ಟೆಂಬರ್ 3, 2010

ಗಜೇಂದ್ರಗಡ ಬೆಟ್ಟದ ಮೇಲೆ ನೀರಿನ ದುರ್ಬಳಕೆ

ಭೂಮಿ ಬೇಸಿಗೆಯ ಬಿಸಿಲಿಗೆ ಕಾದಿದೆ. ಮಳೆಯಿಲ್ಲದೇ ಭೂಮಿಯಲ್ಲಿನ ನೀರಿನ ಪ್ರಮಾಣ ಕಡಿಮೆಯಾಗಿದೆ. ಆದರೆ ನಾವು ಮಾತ್ರ ನೀರನ್ನು ಬೇಕಾಬಿಟ್ಟಿ ಬಳಸಿ ನೀರಿನ ಅಮೂಲ್ಯವಾದ ಪಾತ್ರವನ್ನೇ ಬರಿದು ಮಾಡುವ ಸ್ಥಿತಿಯಲ್ಲಿದ್ದೇವೆ. ಹೀಗಿದ್ದರೂ ದಿನಬೆಳಗಾದರೆ ಸಾಕು ಗ್ರಾಮಗಳಲ್ಲಿ ನಮ್ಮ ಜನರು ಕುಡಿಯಲು ನೀರಿಲ್ಲದ ಕಾರಣಕ್ಕಾಗಿ 5 ರಿಂದ 10 ಕಿ.ಮೀ. ವರೆಗೆ ಹೋಗಿ ಸೈಕಲ್.ಬಂಡಿ.ಕೊನೆಗೆ ಕಾಲುದಾರಿಯಲ್ಲಿ ನೀರನ್ನು ತರುವಂಥಹದನ್ನು ಸಾಮಾನ್ಯವಾಗಿ ಕಾಣಬಹುದಾಗಿದೆ.ಗ್ರಾಮಗಳಲ್ಲಿ ಬಾವಿ ಹಳ್ಳ-ಕೊಳ್ಳ,ಕಾಲುವೆ ಹೊಂಡಗಳು ನೀರಿಲ್ಲದೆಯೇ ಒಣಗುತ್ತಿವೆ.ಇನ್ನೊಂದೆಡೆ ಮಳೆಯಿಲ್ಲದೆ ಗಿಡ ಮರಗಳು ಒಣಗುತ್ತಿವೆ. ಕೃಷಿ ಭೂಮಿಯಲ್ಲಿ ನೀರಿಲ್ಲದೇ ವ್ಯವಸಾಯ ಮಾಡಲು ರೈತರಿಗೆ ಅತೀ ಕಷ್ಟದಾಯಕವಾಗಿದೆ.
ಇಷ್ಟೆಲ್ಲಾ ಆದರೂ ನೀರನ್ನು ಯಾವ ರೀತಿ ದುರ್ಬಳಕೆ ಮಾಡುತ್ತಿದ್ದಾರೆ ಎನ್ನುವುದಕ್ಕೆ ಇಲ್ಲಿದೆ ನೋಡಿ ಒಂದು ಉದಾಹರಣೆ. ಗಜೇಂದ್ರಗಡ ಬೆಟ್ಟದ ಮೇಲೆ ಅನೇಕ ಸಿಹಿನೀರಿನ ಹೊಂಡಗಳಿವೆ. ಅವುಗಳಲ್ಲಿ ಅಕ್ಕ ತಂಗಿ,ಆಕಳ ಮತ್ತು ಮಂಗನ ಹೊಂಡಗಳೆಂದು ಕರೆಯುತ್ತಾರೆ. ಈ ಹೊಂಡಗಳ ನೀರನ್ನು ಇಲ್ಲಿನ ಲಂಬಾಣಿ ಜನಾಂಗದವರು ಸಾರಾಯಿ ತಯಾರಿಸಲು ಉಪಯೋಗಿಸುತ್ತಾರೆ. ಹೊಂಡದ ದಡದ ಮೇಲೆ ಹೆಂಡವನ್ನು ತಯಾರಿಸುತ್ತಿದ್ದಾರೆ.ಸಾರಾಯಿ ತಯಾರಿಸಿದ ಅಶುದ್ಧ ನೀರು ಮತ್ತು ತಯಾರಿಸಿ ಬಿಟ್ಟುಹೊದ ಬೂದಿ,ಕಟ್ಟಿಗೆ ಪುಡಿ ಕೊಳೆತ ಇನ್ನಿತರ ವಸ್ತುಗಳ ಕಾಲುವೆ ಮುಖಾಂತರ ನೇರವಾಗಿ ಹರಿದು ಹೊಂಡವನ್ನು ಸೇರುವುದರಿಂದ ನೀರು ಪಾಚಿ ಕಟ್ಟಿದಂತೆ ಹಚ್ಚ ಹಸಿರಾಗಿ ಮಾರ್ಪಾಡುತವೆ.

ಇದರಿಂದ ನೀರು ವಾಸನೆ ಬರುತ್ತಿರುತ್ತದೆ.ಆದರೆ ಮೂಕ ಪ್ರಾಣಿಗಳು ದಾಹವನ್ನು ತೀರಿಸಿಕೊಳ್ಳಲು ಸಾರಾಯಿ ತ್ಯಾಜ್ಯದಿಂದ ಅಶುದ್ಧಗೊಂಡ ನೀರನ್ನು ಕುಡಿದು ಅನೇಕ ರೋಗ ರುಜಿನಗಳಿಗೆ ತುತ್ತಾಗುತ್ತಿವೆ.ಅದೇ ಮಳೆಗಾಲದಲ್ಲಿ ಹೊಂಡಗಳು ತುಂಬಿ ಜಲಪಾತದಂತೆ ನೀರು ಬೆಟ್ಟದಿಂದ ಧುಮುಕುತ್ತಿರುವ ದೃಶ್ಯ ರಮಣೀಯ. ಹೊಂಡಗಳ ನೀರು ಮಲಿನವಾಗುವುದು ಹೀಗೇ ಮುಂದುವರೆದರೆ ಈಗ ಪ್ರಾಣಿಗಳಿಗೆ ತಗಲುವ ರೋಗಗಳು ಮುಂದೆ ಮನುಷ್ಯರಿಗೂ ತಗಲುವ ಯಾವ ಸಂದೇಹವಿಲ್ಲ.

ಕಾಮೆಂಟ್‌ಗಳಿಲ್ಲ: