ಭಾನುವಾರ, ಸೆಪ್ಟೆಂಬರ್ 26, 2010

ಹೊಂಗೆ ಮರದ ರಸ್ತೆ

ಸಂಜಯ ನಗರ ಬಡಾವಣೆಗೆ ಹೊಂದಿಕೊಂಡಿರುವ ಭೂಪಸಂದ್ರದಲ್ಲಿ. ಇಲ್ಲಿನ ಕಲ್ಪನಾಚಾವ್ಲ ರಸ್ತೆ ಮತ್ತು ಹೆಬ್ಬಾಳದ ಫೈಓವವರ್‌ಗೆ ಸಂಪರ್ಕ ಕಲ್ಪಿಸುವ ೬೦ ಅಡಿ ವಿಶಾಲ ಒಳ ರಸ್ತೆಯೇ ಹೊಂಗೆ ಮರದ ರಸ್ತೆ !
ಈ ರಸ್ತೆಗೆ 'ಹೊಂಗೆ ಮರದ ರಸ್ತೆ' ಎಂದು ಯಾರೂ ಹೆಸರಿಟ್ಟಿಲ್ಲ. ರಸ್ತೆಯ ಇಕ್ಕೆಲಗಳಲ್ಲಿ ಹಸಿರಿನಿಂದ ಕಂಗೊಳಿಸುವ ಸಾಲು ಸಾಲು ಹೊಂಗೆ ಮರಗಳು 'ಈ ರಸ್ತೆಗೊಂದು ಅಂಥ ಹೆಸರಿಡಿ' ಎಂದು ಕೇಳುತ್ತವೆ.

ಹೊಂಗೆ ಮರಗಳ ಸಾಲು.ಇಲ್ಲಿ ಸುಮಾರು ನೂರಕ್ಕೂ ಹೆಚ್ಚು ಮರಗಳಿರಬಹುದು. ಎಲ್ಲ ಮರಗಳನ್ನೂ ಪಾದಚಾರಿ ಮಾರ್ಗದಲ್ಲೇ ನೆಟ್ಟಿದ್ದಾರೆ. ಪ್ರತಿಯೊಂದಕ್ಕೂ ವ್ಯವಸ್ಥಿತವಾಗಿ ಸಿಮೆಂಟ್ ಪಾತಿ ಮಾಡಲಾಗಿದೆ. ದಟ್ಟವಾಗಿರುವ ಈ ಮರಗಳ ನಡುವಿನ ರಸ್ತೆಯಲ್ಲಿ ಮುಂಜಾನೆ, ಸಂಜೆ ವಿಹರಿಸುವುದೆಂದರೆ ವಾಹ್ ! ಅದರ ಅನುಭವವೇ ವಿಭಿನ್ನ !

ಐದಾರು ವರ್ಷಗಳ ಹಿಂದೆ ಭೂಪಸಂದ್ರ ಬಡಾವಣೆಯನ್ನು 'ಹಸಿರಾಗಿಸುವ' ಪ್ರಯತ್ನದಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಹೊಂಗೆ ಸಸಿಗಳನ್ನು ನೆಟ್ಟಿದ್ದಾರೆ. ಆಗ ಇಲಿ ಸ್ವಂತ ಮನೆ ಹೊಂದಿದ್ದವರು ತಮ್ಮ ಮನೆಯ ಮುಂದೆ ಅಲಂಕಾರಕ್ಕಾಗಿ ಎರಡೆರಡು ಹೊಂಗೆ ಮರಗಳನ್ನು ಕೇಳಿ ಕೇಳಿ ನಾಟಿ ಮಾಡಿಸಿದ್ದಾರೆ. ಈಗ ಅವೆಲ್ಲ ಪುಟ್ಟ ಪುಟ್ಟ ಮರಗಳಾಗಿ ಇಡೀ ರಸ್ತೆಗೆ ಹಸಿರುಡುಗೆಯಾಗಿಸಿವೆ.

ಫೆಬ್ರುವರಿ ಮಾರ್ಚ್ ತಿಂಗಳ್ಲಲಿ ಈ ರಸ್ತೆಯ್ಲಲಿ ಮುಂಜಾನೆ ಒಂದು ವಿಶಿಷ್ಟ ಅನುಭವ. ಅದು ಹೂವು ಅರಳುವ ಸಮಯ. ದುಂಬಿಗಳು ಹೂವಿನ ಮಕರಂದ ಹೀರುತ್ತಾ ಆನಂದವಾಗಿ ಹಾರುಡುತ್ತಿರುತ್ತವೆ. ಜೇನಿನ ಹುಳಗಳು ಮಕರಂದ ಹೀರಿ ಪಕ್ಕದ ಬೇಲಿಗೆ ಹಾರಿ 'ಗೂಡು' ಕಟ್ಟುತ್ತವೆ. ಹೊಂಗೆ ಹೂವು ಪರಿಮಳ 'ದೇಹ ದಂಡಿಸುವವರ' ಮನಸ್ಸನ್ನು ಅರಳಿಸುತ್ತದೆ. ಮುಂದಿನ ದಿನಗಳ್ಲಲಿ ಇದೇ ಹೂವುಗಳು ನೆಲದ್ಲಲಿ ಹರಡಿಕೊಂಡು ನಡೆದಾಡುವವರಿಗೆ ನಡೆಮುಡಿ ಹಾಸುತ್ತವೆ. ಈ ನೈಸರ್ಗಿಕ ಪ್ರಕ್ರಿಯೆಯನ್ನು ನೋಡುವುದೇ ಒಂದು ಆನಂದ.ಹೊಂಗೆ ಮರಗಳು ಅಂದ ಹೆಚ್ಚಿಸುವ ಜೊತೆಗೆ ಬೇಸಿಗೆಯ ಬೇಗೆಯನ್ನೂ ತಣಿಸುತ್ತವೆ.

ಬಿಸಿಲಿನ್ಲಲಿ ಓಡಾಡುವ ಹಿರಿಯ ಜೀವಗಳು ಹೊಂಗೆಯ ನೆರಳಿನಲ್ಲಿ ಸ್ವಲ್ಪ ಹೊತ್ತು ವಿರಮಿಸಿ ಕೊಂಡು ಮುಂದುವರಿಯುತ್ತಾರೆ.

ಹೊಂಗೆ ಮರಗಳು ಕೇವಲ ಈ ಪ್ರಮುಖ ರಸ್ತೆಯ್ಲಲಷ್ಟೇ ಅಲ. ಒಳ ರಸ್ತೆಗಳನ್ನೂ ಅಲಂಕರಿಸಿವೆ. ಸಮೀಕ್ಷೆ ಮಾಡಿದರೆ ಪ್ರತಿ ಮನೆಗಳ ಮುಂದು ಎರಡೆರಡು ಹೊಂಗೆ ಮರಗಳಿವೆ. ಆ ಮರಗಳು ಅದೆಷ್ಟು ಅಂದವಾಗಿ ಬೆಳೆದುಕೊಂಡಿವೆಯೆಂದರೆ ಒಂದು ಕಾರನ್ನು ಸರಾಗವಾಗಿ ಮರದ ಕೆಳಗೆ ಪಾರ್ಕ್ ಮಾಡಬಹುದು. ಹಾಗಾಗಿ ಮರಗಳ ನೆರಳು ಕಾರು ಪಾರ್ಕಿಂಗ್‌ಗೆ ಮೀಸಲಾಗಿದೆ. ಮರದ ನೆರಳು ಕಾರು ಪಾರ್ಕಿಂಗ್‌ಗೆ ಹೇಳಿ ಮಾಡಿಸಿದಂತಿವೆ. ಈ ನೆರಳನ್ನೇ ಬಳಸಿಕೊಂಡ ಕೆಲವರು ತಮ್ಮ ಮನೆಗಳ ಮುಂದೆ ಅಲಂಕಾರಿಕ ಸಸ್ಯಗಳನ್ನೂ ಬೆಳೆಸಿ, ರಸ್ತೆಯ ಚೆಲುವು ಹೆಚ್ಚಲು ಕೆಲವು ನಾಗರಿಕರು ಸಹಕರಿಸಿದ್ದಾರೆ.

ಬೆಂಗಳೂರಿನ ರಸ್ತೆ ಬದಿಗಳಲ್ಲಿ ಹೀಗೆ ಮರಗಳ ಸಾಲಿರುವುದು ಸಾಮಾನ್ಯ, ಅದರಲ್ಲಿ ಅಂಥ ವಿಶೇಷವಿಲ್ಲ. ಆದರೆ ಈ ಬಡಾವಣೆಯಲ್ಲಿ ಮರಗಳನ್ನು ಸಂರಕ್ಷಿಸುವ, ಪೋಷಿಸುವ ಮತ್ತು ನಿರ್ವಹಿಸುವ ನಾಗರಿಕರ ಆಸಕ್ತಿ, ಆಸ್ತೆ ಮೆಚ್ಚುವಂಥದ್ದು. ಎಲರೂ ಈ ಕಾರ್ಯಕ್ಕೆ ಕೈ ಜೋಡಿಸದಿದ್ದರೂ ತಮ್ಮ ಕಾರಿಗೆ ನೆರಳು ನೀಡುವ, ದಣಿದ ದೇಹಗಳಿಗೆ ತಂಪನೆರೆಯುವ, ಮನೆ ಮುಂದಿನ ಅಂದ ಹೆಚ್ಚಿಸುವ ವೃಕ್ಷ ಪ್ರೀತಿಯ ಮನಸ್ಸಿರುವ ಕೆಲವರು ಹೊಂಗೆ ಮರಗಳ ಒಂದೇ ಒಂದು ರೆಂಬೆಯನ್ನೂ ಕೀಳಗೊಡುವುದ್ಲಿಲ. ಅಷ್ಟೇ ಅಲ. ನಿತ್ಯ ಕಾರು ತೊಳೆಯುವವರು ಉಳಿದ ನೀರನ್ನು ಮನೆ ಮುಂದಿನ ಗಿಡಗಳಿಗೆ ಉಣಿಸುತ್ತಾರೆ. ಕಾಲ ಕಾಲಕ್ಕೆ ಕೊಂಬೆಗಳನ್ನು ಸವರಿಸುತ್ತಾರೆ. ರೆಂಬೆಗಳು ದೊಡ್ಡದಾಗ್ದಿದರೆ ಪಾಲಿಕೆಯವರಿಗೆ ತಿಳಿಸುತ್ತಾರೆ. ನಾಗರಿಕರ ಮತ್ತು ಪಾಲಿಕೆಯವರ ಸಹಯೋಗದಲ್ಲಿ ಪಾದಚಾರಿ ಮಾರ್ಗಗಳಲ್ಲೂ ಮರಗಳು ಸುರಕ್ಷಿತವಾಗಿವೆ. ಈ ಮರ ಬೆಳೆಸುವ ಮುತುವರ್ಜಿ ನಿಜಕ್ಕೂ ಮಾದರಿಯಾಗುವಂಥದ್ದು.

ಕಾಮೆಂಟ್‌ಗಳಿಲ್ಲ: